Crime NewsHealth | ಆರೋಗ್ಯLatestರಾಷ್ಟ್ರೀಯ-National

ಹೈದರಾಬಾದ್‌: ಕಾಂಗ್ರೆಸ್‌ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ನೇಣಿಗೆ ಶರಣು

ಕರೀಂನಗರ: ಜಿಲ್ಲೆಯ ಚೊಪ್ಪದಂಡಿ ಕಾಂಗ್ರೆಸ್​​ ಶಾಸಕ ಮೇಡಿಪಲ್ಲಿ ಸತ್ಯಂ ಎಂಬವರ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸತ್ಯಂ ಅವರ ಪತ್ನಿ ರೂಪಾದೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ವರ್ಷಗಳ ಹಿಂದೆ ಮೇಡಿಪಲ್ಲಿ ಸತ್ಯಂ ರೂಪಾದೇವಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಸದ್ಯ ಪತ್ನಿ ರೂಪಾದೇವಿ ಜೊತೆ ವೈಮನಸ್ಯ ಇರುವ ಶಂಕೆ ವ್ಯಕ್ತವಾಗಿದೆ. ರೂಪಾದೇವಿ ಅವರು ಮೇಡ್ಚಲ್ ಮುನಿರಾಬಾದ್‌ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು

ಕಳೆದ ಒಂದು ವರ್ಷದಿಂದ ಕೊಂಪಲ್ಲಿ ಪೇಟ್ ಬಶೀರಾಬಾದ್‌ನ ದವೇರಿಯಾ ವಿಲ್ಲಾಸ್‌ನಲ್ಲಿ ನೆಲೆಸಿದ್ದರು. ಆದರೆ, ಒಂದು ತಿಂಗಳ ಹಿಂದೆಯಷ್ಟೇ ಹೈದರಾಬಾದ್‌ನ ಅಲ್ವಾಲ್‌ನ ಪಂಚಶೀಲಾ ಕಾಲೋನಿ ರಸ್ತೆ ಸಂಖ್ಯೆ 12ಕ್ಕೆ ಸ್ಥಳಾಂತರಗೊಂಡಿದ್ದಾರೆ. ಸತ್ಯಂ-ರೂಪಾದೇವಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೆಲ ದಿನಗಳಿಂದ ಶಾಸಕ ದಂಪತಿ ನಡುವೆ ಭಿನ್ನಾಭಿಪ್ರಾಯಗಳಿದ್ದವು ಎಂದು ವರದಿಯಾಗಿದೆ. ಇದನ್ನೂ ಓದಿ: ದಾಲ್‌ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ

https://youtu.be/tpq1XrlUoU8?si=rwiye_r1JpKZOR5d

ರೂಪಾದೇವಿ ಅವರು ನೇಣಿಗೆ ಶರಣಾಗುವ ಮುನ್ನ ಪತಿಗೆ ವೀಡಿಯೋ ಕಾಲ್ ಮಾಡಿ ತಾನು ಸಾಯುತ್ತಿದ್ದೇನೆ ಎಂದು ಹೇಳಿದ್ದಾರೆ. ಕೂಡಲೇ ಚೊಪ್ಪದಂಡಿಯಿಂದ ಕಾರಿನಲ್ಲಿ ಹೈದರಾಬಾದ್ ಗೆ ಹೊರಟುಬಂದಿದ್ದಾರೆ. ಆದರೆ ಅಲ್ವಾಲ್ ತಲುಪಿದಾಗ ರೂಪಾದೇವಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವು ಕಂಡುಬಂದಿದೆ. ಕೂಡಲೇ ಆಕೆಯನ್ನು ಮನೆ ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅದಾಗಲೇ ಆವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

https://youtu.be/xoOfBEbx3fE?si=kUBB3TbCEP-LMZFs

ಪತ್ನಿಯ ಸಾವನ್ನು ಸಹಿಸಲಾಗದೆ ಶಾಸಕ ಸತ್ಯಂ ಆಸ್ಪತ್ರೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ರಾಜ್ಯ ಸಚಿವ ಪೊನ್ನಂ ಪ್ರಭಾಕರ್ ಅವರು ಕೊಂಪೆಲಿಯ ಖಾಸಗಿ ಆಸ್ಪತ್ರೆಗೆ ಶಾಸಕರನ್ನು ಭೇಟಿ ಮಾಡಿದರು. ಮೇಡ್ಚಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆ ಹಿಂದಿನ ಕಾರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ರೂಪಾ ಅವರ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ವಿಧಾನಸೌಧದ ಎದುರು ಯೋಗ ಮಾಡಿದ ಡಿಕೆಶಿ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

Share with Friends
author avatar
News Desk