BlogLatestರಾಷ್ಟ್ರೀಯ-National

ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಕ್ಷಮೆ ಕೇಳಿದ ಪ್ರಧಾನಿ ಮೋದಿ

ನವದೆಹಲಿ: ರಾಜ್‌ಕೋಟ್‌ ಕೋಟೆಯಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಿದ್ದಾರೆ.

ಪ್ರತಿಮೆ ಕುಸಿತದ ಬಗ್ಗೆ ನಾನು ಮೊದಲು ಛತ್ರಪತಿ ಶಿವಾಜಿ ಬಳಿ ಕ್ಷಮೆಯಾಚಿಸಿದೆ. ಪ್ರತಿಮೆ ಕುಸಿತದಿಂದ ನೊಂದಿರುವ ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

https://twitter.com/i/status/1829491808986157529

ಛತ್ರಪತಿ ಶಿವಾಜಿ ಮಹಾರಾಜರನ್ನು ತಮ್ಮ ಆರಾಧ್ಯ ದೈವವೆಂದು ಪರಿಗಣಿಸುವವರು ಮತ್ತು ಘಟನೆಯಿಂದ ತೀವ್ರವಾಗಿ ನೊಂದಿರುವವರ ಬಳಿ ನಾನು ತಲೆಬಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ. ಇದಕ್ಕಿಂತ ದೊಡ್ಡದು ಏನು ಇಲ್ಲ ಎಂದು ಮೋದಿ ತಿಳಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ನೌಕಾಸೇನೆ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಈ ಪ್ರತಿಮೆಯು ಮರಾಠಾ ನೌಕಾಪಡೆ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಕಡಲ ರಕ್ಷಣೆ ಮತ್ತು ಭದ್ರತೆಯ ಪರಂಪರೆಯನ್ನು ಗೌರವಿಸುವ ಗುರಿಯನ್ನು ಹೊಂದಿದೆ.

Share with Friends
author avatar
News Desk