Latestಚುನಾವಣೆ-Electionರಾಜ್ಯ-Karnatakaಶಿವಮೊಗ್ಗ-Shivamogga

ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನಲೆ- ಬಿ.ವೈ ರಾಘವೇಂದ್ರ ಟೆಂಪಲ್ ರನ್

ಶಿವಮೊಗ್ಗ: ಲೋಕಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ (BY Raghavendra) ಟೆಂಪಲ್ ರನ್ ಮಾಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಆರಂಭ ಆಗುತ್ತಿದ್ದಂತೆಯೇ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗದ ರವೀಂದ್ರ ನಗರದಲ್ಲಿರುವ ಗಣೇಶ ದೇವಸ್ಥಾನ, ಕೋಟೆ ಆಂಜನೇಯ ದೇವಸ್ಥಾನ ಹಾಗೂ ತಿಲಕ ನಗರದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲದೇ ಗೆಲುವುಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ – ಆದಿಚುಂಚನಗಿರಿ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹೆಚ್‍ಡಿಕೆ

https://youtu.be/F0T9C-4BUvE?si=c5Q0i2B83HmJ0h0z

ಶಿವಮೊಗ್ಗದಲ್ಲಿ ಒಟ್ಟು ಅಂಚೆ ಮತಗಳು 5199 ಚಲಾವಣೆಯಾಗಿದೆ. ಮತಎಣಿಕೆ ನಡೆಯುತ್ತಿದ್ದು, ಸದ್ಯ ಬಿ.ವೈ ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.

Share with Friends
author avatar
News Desk