Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಪೆನ್‌ಡ್ರೈವ್ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ – ಕೊನೆಗೂ ಹೆಚ್‌ಡಿಡಿ ಪ್ರತಿಕ್ರಿಯೆ

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಕೊನೆಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD.Devegowda) ಅವರು ಮೌನ ಮುರಿದಿದ್ದು, ಪ್ರಜ್ವಲ್‌ ವಿರುದ್ಧ ಕ್ಯಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ.

ತಮ್ಮ ಹುಟ್ಟುಹಬ್ಬದ (Birthday) ಪ್ರಯುಕ್ತ ಬೆಂಗಳೂರಿನ ಜೆಪಿ ನಗರ ಲಕ್ಷ್ಮಿ-ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗಿ ಬಂದ ನಂತರ ಸುದ್ಮಾದಿಗಾರರೊಂದಿಗೆ ತನಾಡಿದ್ದ ಅವರು, ಪ್ರಜ್ವಲ್ ಮತ್ತು ರೇವಣ್ಣ ಅವರ ಪ್ರಕರಣದಲ್ಲಿ ಏನೇನು ನಡೆಯುತ್ತಿದೆ ಅನ್ನೋದು ಗೊತ್ತಿದೆ. ಪ್ರಕರಣ ಕೋರ್ಟ್‌ನಲ್ಲಿ ಇರೋದ್ರಿಂದ ನಾನು ಅದರ ಬಗ್ಗೆ ಕಾಮೆಂಟ್ ಮಾಡಲ್ಲ ಎಂದು ಅವರು ಹೇಳಿದ್ದಾರೆ.. ಇದನ್ನೂ ಓದಿ: ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ಸಾವು- ದೇಹ ಛೀದ್ರ ಛೀದ್ರ

https://youtu.be/yQhaOSOME_w?si=fKFUh3XjsqbvhjTx

ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದು, ನೆಲದ ಕಾನೂನು ವ್ಯಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ ಎಂದಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ –ಆರೋಪಿ ಅಂದರ್‌

ಈ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ. ಅವರ ಹೆಸರನ್ನು ನಾನು ಹೇಳಲ್ಲ. ಆದರೆ ತಾರೆಲ್ಲ ಭಾಗಿಯಾಗಿದ್ದಾರೆ ಅವರ ವಿರುದ್ಧ ಕ್ರಮ ಆಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

https://youtu.be/OMuk5-xqtY8?si=fwto6KHqt7aVtD_B

ಜೊತೆಗೆ ಪ್ರಕರಣದಲ್ಲಿ ಅಪಾಯಕ್ಕೆ ಸಿಲುಕಿದ್ದಾರೋ ಆ ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕು ಎಂದು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ನಮಗೆ ಯಾವುದೇ ತಕರಾರು ಇಲ್ಲ. ಆದ್ರೆ ರೇವಣ್ಣ ಬಗ್ಗೆ ಮಾಡಿರೋ ಕೇಸ್ ಬಗ್ಗೆ ರಾಜ್ಯದ ಜನತೆ ನೋಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. . ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಪೊಲೀಸರ ವಶ

Share with Friends
author avatar
News Desk