LatestWeatherಬೆಂಗಳೂರು-Bengaluruರಾಜ್ಯ-Karnataka

ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಸಿಲಿಕಾನ್‌ ಸಿಟಿ (Silicon City) ಸೇರಿದಂತೆ , ಕೊಡಗು, ಹಾಸನ, ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲೂ ಮಳೆಯಾಗಲಿದೆ. ಎಂಎಂ ಹಿಲ್ಸ್​, ಬಂಡೀಪುರ, ಸಿದ್ದಾಪುರ, ಬೇಗೂರು, ಚಾಮರಾಜನಗರ, ಮೂರ್ನಾಡು, ಎಚ್​ಡಿ ಕೋಟೆ, ಪುತ್ತೂರು, ಸುಳ್ಯ, ಕೃಷ್ಣರಾಜಪೇಟೆ, ಮೈಸೂರು, ಕುಶಾಲನಗರ, ಹುಣಸೂರು, ಹಾರಂಗಿ, ಮಂಗಳೂರು, ಸೋಮವಾರಪೇಟೆ, ಕನಕಪುರ, ಭಾಗಮಂಡಲ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಕ್ರಿಕೆಟ್ ಜಗಳ ತಾರಕಕ್ಕೇರಿ ಗಲಾಟೆ -ಓರ್ವ ಪೊಲೀಸ್ ಪೇದೆಗೆ ಗಾಯ

ಸಾಂರ್ಧಬಿಕ ಚಿತ್ರ

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ. ಇದನ್ನೂ ಓದಿ: ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

https://youtu.be/EX8Otkuxgrk?si=cPWYVGuPnYrjgipo

ಸದ್ಯ ಬಿಸಿಲಿನ ತಾಪಕ್ಕೆ ಜನರು ಬೆಂದು ಹೋಗಿದ್ದರು ಇದೀಗ ವರುಣ ತಂಪೆರೆದಿದ್ದಾನೆ. ಇಂದು ಮತ್ತಷ್ಟು ಮಳೆಯಾಗಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

Share with Friends
author avatar
News Desk