Crime NewsLatestಬೆಳಗಾವಿ-Belagaviರಾಜ್ಯ-Karnataka

ಕೋರ್ಟ್ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ

ಬೆಳಗಾವಿ: ಜೈಲಿನಲ್ಲಿದ್ದುಕೊಂಡೇ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಹಾಗೂ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಅವರಿಗೆ ಬೆದರಿಕೆ ಹಾಕಿದ್ದ ಆರೋಪಿ ನ್ಯಾಯಾಲಯದ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ (Pakistan Zindabad) ಎಂದು‌ ಘೋಷಣೆ ಕೂಗಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾ ಕೈದಿ ಜಯೇಶ್ ಪೂಜಾರಿಯೇ (Jayesh Poojari) ಅಲಿಯಾಸ್‌ ಶಾಕೀರ್‌ ಮೊಹಮ್ಮದ್‌ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಬೆಳ್ಳಗ್ಗೆ 11 ಗಂಟೆಗೆ ಕೃತ್ಯ ನಡೆದಿದೆ. ಇತ್ತ ಮೂಲತಃ ದಕ್ಷಿಣ ಕನ್ನಡದವನಾಗಿದ್ದಾನೆ. ಜಯೇಶ ಪೂಜಾರಿ ಶಾಕೀರ್ ಮೊಹಮ್ಮದ್ ಆಗಿ ಮತಾಂತರವಾಗಿದ್ದಾನೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಶಿಕ್ಷೆಗೆ ಒಳಗಾದ ಕೈದಿಯಾಗಿ ಇದ್ದಾ‌ನೆ. ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಧರ್ಮದೇಟು ನೀಡಿದ್ದು ಸ್ಥಳದಲ್ಲಿದ್ದ ಪೊಲೀಸರು ಆತನನ್ನು ರಕ್ಷಿಸಿ ಎಪಿಎಂಸಿ ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರರ ದಾಳಿ- ಇಬ್ಬರು ಉಗ್ರರ ಎನ್‌ಕೌಂಟರ್‌

https://youtu.be/FHqtzTrSrK0?si=yWvjFt7zbs2AJL9D

ಈತ ಅಲೋಕ್‌ ಕುಮಾರ್‌ ಅವರಿಗೆ ಕರೆ ಮಾಡಿ ಜೈಲಿನಿಂದಲೇ ಜೀವ ಬೆದರಿಕೆ ಹಾಕಿದ್ದ. ಇದೇ ಕಾರಣಕ್ಕೆ ಆತನ ವಿಚಾರಣೆಗಾಗಿ ಪೊಲೀಸರು ನ್ಯಾಯಾಲಯಕ್ಕೆ ಕರೆ ತಂದಾಗ ಪಾಕಿಸ್ತಾನ ಪರ ಘೋಷನೆ ಕೂಗಿದ್ದಾನೆ.ಇದನ್ನೂ ಓದಿ: ವಿಮಾನ ನಿಲ್ದಾಣ ಆಯ್ತು ಇದೀಗ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ

https://youtu.be/wKlCwzdj9LU?si=0tqOlXOf85-mF3rC

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯ 4ನೇ ಜೆಎಂಎಫ್‌ಸಿ ಕೋರ್ಟ್ ಹಾಲ್ ಬಳಿಯಲ್ಲಿ ಘಟನೆ ನಡೆದಿದ್ದು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ನಿಜ ಎಂದಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಡಬಲ್ ಮರ್ಡರ್ ಕೇಸ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಎಡಿಜಿಪಿ ಅಶೋಕ್ ಕುಮಾರ್ ಫೋನ್ ಮೂಲಕ ಬೆದರಿಕೆ ಹಾಕಿರುವ ಕೇಸ್‌ಗಳಿವೆ ಎಂದರು. ಇದನ್ನೂ ಓದಿ: ಕುವೈತ್‌ನಲ್ಲಿ ಅಗ್ನಿ ಅವಘಡ- 4 ಭಾರತೀಯರು ಸೇರಿ 35 ಜನರ ಸಜೀವ ದಹನ

https://youtu.be/lMx1027RUBE?si=lpgciy2xeJJfTkli

ಪಾಕ್‌ ಪರ ಘೋಷಣೆ ಕೂಗಿದ ಸಂಬಂಧ ಕೇಸ್ ದಾಖಲು ಮಾಡುತ್ತೇವೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ವಿಚಾರಣೆ ಮಾಡುತ್ತೇವೆ. ದಕ್ಷಿಣ ಕನ್ನಡದ ಡಬಲ್ ಮರ್ಡರ್ ಕೇಸ್ ನಲ್ಲಿ ಜೀವಾವಧಿ ಶಿಕ್ಷೆಯಾಗಿದ್ದು ಕೆಲ ವರ್ಷಗಳಿಂದ ಹಿಂಡಲಗಾ ಜೈಲಿನಲ್ಲಿ ಇದ್ದಾನೆ ಎಂದು ತಿಳಿಸಿದರು. ಇದನ್ನೂ ಓದಿ: ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

Share with Friends
author avatar
News Desk