BlogLatestರಾಜ್ಯ-Karnatakaವಿಜಯಪುರ-Vijayapura

ಶಾಲೆಯಲ್ಲಿ ಮಕ್ಕಳೊಂದಿಗೆ ಬಿಸಿಯೂಟ ಸವಿದ ನವಿಲು

ವಿಜಯಪುರ : ಸರ್ಕಾರಿ ಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ವಿಧ್ಯಾರ್ಥಿಗಳು ಮದ್ಯಾಹ್ನ ಬಿಸಿಊಟ ಸೇವಿಸುತ್ತಿರುವ ಸಮಯದಲ್ಲಿ ರಾಷ್ಟ್ರಪಕ್ಷಿ ನವಿಲು ಮಕ್ಕಳೊಂದಿಗೆ ಬಿಸಿಊಟ ಸವಿದು ಮಕ್ಕಳಿಗೆ ಮನೊಲ್ಲಾಸ ಹೆಚ್ಚಿಸಿದ ಘಟನೆ ವಿಜಯಪುರ ತಾಲ್ಲೂಕಿನ ಜಂಬಗಿ ಗ್ರಾಮದ ಕೆರೂರವಸ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ವಸ್ತಿ ಶಾಲಾಯಲ್ಲಿ ನಡೆದಿದೆ.

ಮಕ್ಕಳು ಪ್ರಾರ್ಥನೆ ಮಾಡುತ್ತಾ ಕುಳಿತಾಗ ಅನ್ನದ ತಟ್ಟೆಗೆ ಕಡೆಗೆ ಸಾಗಿದೆ. ಈ ಸಮಯದಲ್ಲಿ ವಿಧ್ಯಾರ್ಥಿಯೋರ್ವಳು ತನ್ನ ತಟ್ಟೆಯನ್ನು ನವಿಲಿಗೆ ಕೊಟ್ಟು ಬೇರೊಂದು ತಟ್ಟೆ ತೆಗೆದುಕೊಂಡಿದ್ದಾಳೆ. ವರ್ಗಾಕೋಣೆಯ ಹತ್ತಿರವು ಬಂದ ನಾಟ್ಯ ಮಯೂರಿ ಧಾನ್ಯಗಳನ್ನು ಸವಿದು ತನ್ನ‌ಹಸಿವನ್ನು ನಿಗಿಸಿಕೊಂಡಿದೆ.

Share with Friends
author avatar
News Desk