Latestಚಾಮರಾಜನಗರ-Chamarajanagaraಚುನಾವಣೆ-Electionರಾಜ್ಯ-Karnataka

ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ- ಗ್ರಾಮ ಖಾಲಿ ಖಾಲಿ

ಚಾಮರಾಜನಗರ: ಇವಿಎಂ ದ್ವಂಸ ಪ್ರಕರಣ ಸಂಬಂಧ ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ನಡೆಯುತ್ತಿರುವ ಮರುಮತದಾನಕ್ಕೆ (Re-Election) ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಾಮರಾಜನಗರ (Chamrajanagar) ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ (Mahadeshwara Hils) ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಇಂದು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಿಗದಿಪಡಿಸಲಾಗಿದೆ. ಇಂಡಿಗನತ್ತ ಹಾಗೂ ಮೆಂದಾರೆ ಎರಡೂ ಗ್ರಾಮಗಳು ಸೇರಿ 528 ಮತದಾರರಿಗೆ ಮತಗಟ್ಟೆ 146 ರಲ್ಲಿ ಮರು ಮತದಾನ ನಡೆಯುತ್ತಿದೆ. ಸದ್ಯ 528 ಮತದಾರರ ಕೇವಲ ಪೈಕಿ 54 ಮತಗಳು ಮಾತ್ರ ಚಲಾವಣೆಯಾಗಿವೆ. ಮೆಂದಾರೆ ಹಾಡಿಯ 54 ಜನರಿಂದ ಮತದಾನವಾಗಿದೆ. ಇದನ್ನೂ ಓದಿ: ಬಟ್ಟೆ ತೊಳೆಯುತ್ತಿದ್ದ ಯುವತಿ ಕೊಲೆ- ಗಂಡನ ಮೆಲೆ ಅನುಮಾನ

https://youtu.be/BNwwXuWwJxU?si=puQ5bO6h7fRctzYJ

ಮೆಂದಾರೆ ಗ್ರಾಮಸ್ಥರನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಕರೆತಂದು ಮತದಾನ ಮಾಡಿಸುತ್ತಿದ್ದಾರೆ. ಆದರೆ ಇಂಡಿಗನತ್ತ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದಾರೆ. ಈಗಾಗಲೇ ಇವಿಎಂ ಧ್ವಂಸ ಪ್ರಕರಣ ಸಂಬAಧ 33 ಮಂದಿಯನ್ನು ಬಂಧಿಸಲಾಗಿದೆ. ಈ ಹಿನ್ನೆಲೆ ಇಂಡಿಗನತ್ತ ಗ್ರಾಮ ಖಾಲಿ ಹೊಡೆಯುತ್ತಿದೆ. ಬಂಧನದ ಭೀತಿಯಿಂದ ಗ್ರಾಮಸ್ಥರು ತಲೆ ಕರೆಸಿಕೊಂಡಿದ್ದಾರೆ. ಇದನ್ನೂ ಓದಿ: ಇದೆಲ್ಲಾ ರಾಜಕೀಯ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? ರೇವಣ್ಣ ಫಸ್ಟ್ ರಿಯಾಕ್ಷನ್

https://youtu.be/hUI_GuBNXgY?si=WRL7uDuFQwc2pqQ7

ಮತಗಟ್ಟೆ ಸುತ್ತಮುತ್ತ 100 ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಅನ್ವಯ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ನೂರಾರು ಮಹಿಳೆಯರ ಬದುಕು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ: ಪ್ರಿಯಾಂಕಾ ಗಾಂಧಿ

Share with Friends
author avatar
News Desk