Latestಬೆಂಗಳೂರು-Bengaluruರಾಜ್ಯ-Karnataka

ಸಿಎಂ ಭೇಟಿಯಾದ ರೇಣುಕಾಸ್ವಾಮಿ ಕುಟುಂಬ- ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಪೋಷಕರು ಮನವಿ

ಬೆಂಗಳೂರು: ನಟ ದರ್ಶನ್ (Challenging Star Darshan) ಟೀಂನಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತಂದೆ-ತಾಯಿ ಸಿಎಂ ಸಿದ್ದರಾಮಯ್ಯ ಅವರನ್ನ ಇಂದು ಭೇಟಿಯಾಗಿದ್ದಾರೆ.

ಮಾಜಿ ಸಚಿವ ಆಂಜನೇಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದ ಪೋಷಕರು ಸಿಎಂ ಮುಂದೆ ಅಳಲು ತೋಡಿಕೊಂಡಿದ್ದು, ಜೊತೆಗೆ ತಮ್ಮ ಮನೆಯ ಪರಿಸ್ಥಿತಿಯ ಬಗ್ಗೆ ಹೇಳಿಕೊಂಡು ರೇಣುಕಾಸ್ವಾಮಿ ಪೋಷಕರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಬಂಧನವಾದಾಗ ವಿಚಾರಣೆ ತಂಡದಲ್ಲಿದ್ದ ಮಹಿಳಾ ಪಿಎಸ್‌ಐಗೆ ನೋಟಿಸ್

https://youtu.be/97Xqp_kxIBQ?si=gfWof1eCrdq25ljV

ಸದ್ಯ ಪೊಲೀಸರ ತನಿಖೆ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ರೇಣುಕಾಸ್ವಾಮಿ ತಂದೆ-ತಾಯಿ, ಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದ್ರು. ಪೋಷಕರ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ರು.

ಜೂನ್ 8 ರಂದು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು. ಅಲ್ಲಿಂದ ಪಟ್ಟಣಗೆರೆ ಶೆಡ್‍ಗೆ ಕರೆದೊಯ್ದು ಚಿತ್ರಹಿಸೆ ನೀಡಿ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಲೆ ಮಾಡಿತ್ತು. ಕೊಲೆ ಬಳಿಕ ಮೃತದೇಹವನ್ನು ಸುಮ್ಮನಹಳ್ಳಿ ಮೊರಿ ಬಳಿ ಎಸೆಯಲಾಗಿತ್ತು. ಇದನ್ನೂ ಓದಿ: ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ – ಪ್ರಧಾನ ಅರ್ಚಕ ಆರೋಪ

https://youtu.be/OvXrOZlPR8I?si=ZTeREbXN4yMKmhz7

ಇತ್ತ ನಾಲ್ವರು ಕಾಮಾಕ್ಷಿಪಾಳ್ಯ ಠಾಣೆಗೆ ತೆರಳಿ ಹಣದ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ನಾಲ್ವರು ಶರಣಾಗಿದ್ದರು. ಇದರಿಂದ ಸಂಶಯಗೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದಾಗ ನಿಜ ಬಣ್ಣ ಬಯಲಾಗಿದೆ. ಪ್ರಕರಣ ಸಂಬಂಧ 17 ಆರೋಪಿಗಳನ್ನು ಬಂಧಿಸಲಾಗಿದ್ದು, ಜೈಲಿಗಟ್ಟಲಾಗಿದೆ. ಇದನ್ನೂ ಓದಿ: ರಸ್ತೆಗಾದ್ರೂ ಇಳಿಲಿ ಬೀದಿಗಾದ್ರೂ ಇಳಿಲಿ, KMF ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು: ಭೀಮಾನಾಯ್ಕ್

Share with Friends
author avatar
News Desk