Latestದಕ್ಷಿಣ ಕನ್ನಡ-Dakshina Kannadaರಾಜಕೀಯ | Politicsರಾಜ್ಯ-Karnataka

ಮುಂದುವರಿದ ರೇವಣ್ಣರ ಟೇಂಪಲ್‌ ರನ್‌; ಧರ್ಮಸ್ಥಳದ ಮಂಜುನಾಥನಿಗೆ ವಿಶೇಷ ಪೂಜೆ

ಮಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D. Revanna) ಟೆಂಪಲ್ ರನ್ ಮುಂದುವರಿದಿದ್ದು, ಇಂದು (ಮೇ 27) ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala) ಮುಂಜುನಾಥ ಸ್ವಾಮಿ ದೇವಸ್ಥಾನಕ್ಕೆ (Sri Manjunatheshwara Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರೇವಣ್ಣ ಅವರು ಸುಮಾರು ಒಂದು ಗಂಟೆಗಳ ಕಾಲ ದೇವಸ್ಥಾನದ ಗರ್ಭಗುಡಿಯ ಮುಂಭಾಗದಲ್ಲೇ ನಿಂತು ಸರ್ವ ಸೇವೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು (Veerendra Heggade) ಭೇಟೆಯಾಗಿ ಮಾತುಕತೆ ನಡೆಸಿದರು. ಇದನ್ನೂ ಓದಿ: ಭಾರತಕ್ಕೆ ಜಿಮ್ನಾಸ್ಟಿಕ್‍ನಲ್ಲಿ ಮೊದಲ ಚಿನ್ನ – ದೀಪಾ ಕರ್ಮಾಕರ್ ಏಷ್ಯನ್ ಚಾಂಪಿಯನ್

https://youtu.be/cyl9pB0pToY?si=A1I7r-teksPiZOBf

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜುನಾಥ ಸ್ವಾಮಿಯ ದರ್ಶನಕ್ಕೆ ಯಾವಾಗಲೂ ಬರುತ್ತೇನೆ. ನಾನು ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ, ದೇವರ ಬಗ್ಗೆ ನಂಬಿಕೆಯಿದೆ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ವೈದ್ಯರ ಬಂಧನ

https://youtu.be/eZBqsa1wkJY?si=eP8iguuPqsEhTTzG

ಭಾನುವಾರ (ಮೇ 26) ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು. ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಂಗಾಳ ಕೊಲಿಯಲ್ಲಿ ಅಪ್ಪಳಿಸಿದ ರೆಮಲ್ ಸೈಕ್ಲೋನ್- ರೈಲು, ವಿಮಾನ ಹಾರಾಟ ಸ್ಥಗಿತ

Share with Friends
author avatar
News Desk