EntertainmentLatestಬೆಂಗಳೂರು-Bengaluruರಾಜ್ಯ-Karnataka

ಶಿವಣ್ಣ ಅಭಿಮಾನಿಗಳಿಂದ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ

ಬೆಂಗಳೂರು: ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ (Kumar Bangarappa) ನಿವಾಸಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar) ಅಭಿಮಾನಿಗಳು ಇಂದು ಮುತ್ತಿಗೆ ಹಾಕಿದ್ದಾರೆ.

ಕುಮಾರ್‌ ಬಂಗಾರಪ್ಪ ಅವರು ರಾಜ್ ಕುಮಾರ್ ಕುಟುಂಬ ಹಾಗೂ ಶಿವರಾಜ್ ಕುಮಾರ್ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಅದು ನಮಗೆ ನೋವಾಗಿದೆ ಅವರನ್ನ ಹೊರಗೆ ಕರೆಸಿ ಕ್ಷಮೆ ಕೇಳುವಂತೆ ಆಗ್ರಹಿಸಿ ಅಭಿಮಾನಿಗಳು ಬಾರಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ಜೂನ್‌ 12 ರ ವರೆಗೆ ಭಾರೀ ಮಳೆಯ ಎಚ್ಚರಿಕೆ

https://youtu.be/N__BjhNj9eo?si=huvMjYvGeVYaUQhm

ಇತ್ತ ಮನೆ ಗೇಟ್ ಒಳಗೆ ನುಗ್ಗಿ ಕುಮಾರ್ ಬಂಗಾರಪ್ಪ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಶಿವಣ್ಣ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಸಿಬಿಐ ಬಳಿಕ ತನಿಖೆಗೆ ED ಎಂಟ್ರಿ!

https://youtu.be/AIedS4838dw?si=6-_JNdLZwj9tbtc2

ಮನೆ ಬಾಗಿಲಿನಿಂದ ಹೊರ ಹೋಗುವಂತೆ ಪೊಲೀಸರು ನಟನ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದರು. ಬಳಿಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಕೆಎಸ್ ಆರ್ ಪಿ ತುಕಡಿ ಆಗಮಿಸಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇನ್ನು ಕುಮಾರ್ ಬಂಗಾರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಓಡಿ ಹೋಗ್ತಿದ್ದ ಪ್ರತಿಭಟನಾಕಾರರನ್ನ ಹಿಡಿದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಪಾರ್ಕ್ ಸುತ್ತಮುತ್ತ ನಿಂತಿದ್ದ ಪ್ರತಿಭಟನಾಕಾರರನ್ನ ಕೂಡ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಮಳೆಯಿಂದಾಗಿ ಆಲಮಟ್ಟಿ ಜಲಾಶಯ ಓಳ ಹರಿವು ಹೆಚ್ಚಳ

Share with Friends
author avatar
News Desk