LatestTop Storiesಚಾಮರಾಜನಗರ-Chamarajanagara

ಸ್ವಾತಂತ್ರ ದಿನದಂದೇ ಕಾಡಿನಲ್ಲಿ ಶೂಶೌಟ್ : ಮೂವರ ಸಾವು –ಓರ್ವ ಪರಾರಿ

ಚಾಮರಾಜನಗರ / ಹನೂರು : ಸ್ವಾತಂತ್ರ್ಯ ದಿನದಂದೇ ಅರಣ್ಯದಲ್ಲಿ ಕಾಡುಗಳ್ಳರ ಮತ್ತು ಅರಣ್ಯ ಸಿಬ್ಬಂದಿಗಳ ನಡುವೆ ನಡೆದ ಭೀಕರ ಗುಂಡಿನದಾಳಿ ನಡೆದ ಪರಿಣಾಮ ಮೂವರು ಕಳ್ಳ ಬೇಟೆಗಾರರು ಸಾವನ್ನಪ್ಪಿದ್ದು, ಓರ್ವ ಆರೋಪಿ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಸಮೀಪದ ಮರಿಯ ಮಂಗಲ ಬೀಟ್ನಲ್ಲಿ ಶನಿವಾರ ಮುಂಜಾನೆ ನಡೆದಿದ್ದು, ಹನೂರು ತಾಲ್ಲೂಕಿನ ಶಾಗ್ಯ ಸಮೀಪದ ಮರಿಯ ಮಂಗಲ ಬೀಟ್ನಲ್ಲಿ ತೊಮಿಯರ್ ಪಾಳ್ಯ ಗ್ರಾಮದ ಅಂತೊಣಿಸ್ವಾಮಿ , ಪೀಟರ್ , ಕುಮಾರ್ ಗುಂಡಿನ ದಾಳಿಗೆ ಸಾವನ್ನಪ್ಪಿದ್ದು, ಮರಿಯ ಮಂಗಲದ ಮಹಿಮಾದಾಸ್ ಪರಾರಿಯಾಗಿದ್ದಾನೆ.

ಸ್ವಾತಂತ್ರ ದಿನದಂದೇ ಕಾಡಿನಲ್ಲಿ ಶೂಶೌಟ್ ಮೂವರ ಸಾವು ಓರ್ವ ಪರಾರಿ

ಮೃತರು ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿದ್ದರು ಹಾಗೂ ವನ್ಯ ಪ್ರಾಣಿಯನ್ನು ಬೇಟೆ ಮಾಡಿ ಅದರ ಮಾಂಸವನ್ನು ಹಂಚಿಕೆ ಮಾಡಿಕೊಳ್ಳುವ ಸಮಯದಲ್ಲಿ ಖಚಿತ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಗುಂಡಿನ ದಾಳಿ ನಡೆಸಿದಾಗ ಅಂತೊಣಿಸ್ವಾಮಿ , ಪೀಟರ್ , ಕುಮಾರ್ ಸಾವನ್ನಪ್ಪಿದರು. ಪರಾರಿಯಾಗಿರುವ ಮಹಿಮಾದಾಸ್ ಸೆರೆಗಾಗಿ ಅರಣ್ಯಾಧಿಕಾರಿಗಳು ಶೋಧನಾ ಕಾರ್ಯ ಮುಂದುವರೆಸಿದ್ದಾರೆ.

ಗುಂಡಿನ ದಾಳಿಯಲ್ಲಿ ಮೃತಪಟ್ಟ ಮೂವರ ಮೃತ ದೇಹಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ನಂತರ ಪೊಲೀಸ್ ಬಂದೂಬಸ್ತ್ ನೊಂದಿಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಶವ ಪರೀಕ್ಷೆಗೆ ಕಳುಹಿಸಲಾಯಿತು.

ರೊಚ್ಚಿಗೆದ್ದ ಗ್ರಾಮಸ್ಥರು : ಶಾಗ್ಯ ಬಳಿಯ ಮರಿಯ ಮಂಗಲ ಬೀಟ್ನಲ್ಲಿ ತೊಮಿಯರ್ ಪಾಳ್ಯ ಗ್ರಾಮದ ಮೂವರನ್ನು ಅರಣ್ಯ ಸಿಬ್ಬಂದಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದ ಕೆಲವರು ಶಾಗ್ಯದಲ್ಲಿರುವ ಸಹಾಯಕ ವಲಯ ಅರಣ್ಯಾಧಿಕಾರಿಗಳ ಕಛೇರಿಯ ಮೇಲೆ ದಾಳಿ ನಡೆಸಿ ಕಛೇರಿಯಲ್ಲಿದ್ದ ವಸ್ತುಗಳನ್ನು ದ್ವಂಸ ಮಾಡಿದ್ದಾರೆ.

ಪ್ರಸ್ತುತ ತೊಮಿಯರ್ ಪಾಳ್ಯ, ಶಾಗ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸ್ ಬಂದೂಬಸ್ತ್ ಮಾಡಲಾಗಿದೆ.

Share with Friends
author avatar
Digital Desk