BlogLatestರಾಜಕೀಯ | Politics

ಸಿದ್ದರಾಮಯ್ಯನವರೇ, ಈಗಲಾದರೂ ನೈತಿಕೆ ಹೊಣೆ ಹೊತ್ತು ರಾಜೀನಾಮೆ ನೀಡಿ : ಆರ್ ಅಶೋಕ್

ಬೆಂಗಳೂರು : ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ.

ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ. ವಿರೋಧ ಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನ, ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಮಾನ್ಯ ಹೈಕೋರ್ಟ್ ನ ತೀರ್ಪು ಇಡೀ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ ಎಂದಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿಲುವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಿಟ್‌ ಅರ್ಜಿಯನ್ನು ವಜಾಗೊಳಿಸಿದೆ.

Share with Friends
author avatar
News Desk