Crime NewsLatestರಾಷ್ಟ್ರೀಯ-National

ತಮಿಳುನಾಡಿನ ಬಿಎಸ್‌ಪಿ ಅಧ್ಯಕ್ಷ ಹತ್ಯೆ ಕೇಸ್- 8 ಮಂದಿ ಪೊಲೀಸ್‌ ವಶಕ್ಕೆ

ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ (Armstrong) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 8 ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್ ಐಪಿಎಸ್ ಖಚಿತಪಡಿಸಿದ್ದು, ಹತ್ಯೆಯ ಹಿಂದಿನ ಉದ್ದೇಶವನ್ನು ತಿಳಿಯಲು ವಶಕ್ಕೆ ಪಡೆದುಕೊಂಡವರನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ಆರ್ಮ್‌ಸ್ಟ್ರಾಂಗ್ ನ ಅವರ ನಿವಾಸದ ಬಳಿ ಬೈಕಿನಲ್ಲಿ ಬಂದ ಆರು ಮಂದಿ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.‌ ಇದನ್ನೂ ಓದಿ: ಚಾರ್ಮಾಡಿ ಘಾಟ್‍ನಲ್ಲಿ ಭೂಮಿ ಬಿರುಕು- ಕಂಗಾಲದ ಕಾಫಿನಾಡು ಜನತೆ

https://youtu.be/H321Hvd7Xug?si=IzaFp5rzC3fm7fDh

ದಾಳಿಯ ಬಳಿಕ ಆರ್ಮ್‌ಸ್ಟ್ರಾಂಗ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. .‌ ಇದನ್ನೂ ಓದಿ: ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್- ಜೆಡಿಎಸ್‌ಗೆ ಸಿಕ್ತು ಸರ್ಕಾರ ವಿರುದ್ಧ ಹೊಸ ಅಸ್ತ್ರ

https://youtu.be/0nw_uM87-yw?si=-h82EWG7bRr6Jaal

ಆರ್ಮ್‌ಸ್ಟ್ರಾಂಗ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿ ದೆಹಲಿ ಪೊಲೀಸರಿಗೆ ಶರಣು

Share with Friends
author avatar
News Desk