Crime NewsLatestಬೀದರ್​-Bidarರಾಜ್ಯ-Karnataka

ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?

ಬೀದರ್: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ (Crusor) ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನ ತಾಲೂಕಿನ ಚಟ್ನಳ್ಳಿ (Chattihalli) ಗ್ರಾಮದ ಬಳಿ ಬೆಳಗಿನ ಜಾವ ನಡೆದಿದೆ.

ಪ್ರದೀಪ್ (25), ವಿನೋದ್ (26), ವರ್ದೀಶ್ (25) ಮೃತ ಪಟ್ಟ ದುರ್ದೈವಿಗಳು. ಕ್ರೂಸರ್ ವಾಹನದಲ್ಲಿದ್ದ ಐವರ ಫೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲ ಬೀದರ್ ತಾಲೂಕಿನ ಚಾಂಗಲೇರಾ ಯಾಕತಪುರ ಗ್ರಾಮದವರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಪ್ರಧಾನಿಯಾಗಲು ಪಾಕ್ ಪ್ರಾರ್ಥನೆ: ಮೋದಿ

https://youtu.be/7ZX33HT5nQs?si=MqBqb3-VaLpW4HXc

ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಇಂದು ಬೆಳಗ್ಗೆ ಡಿಕ್ಕಿಯಾಗಿದೆ. ಹೀಗಾಗಿ ವಾಹನದ ಒಳಗಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೇ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತವಾಗುತ್ತಿದ್ದಂತೆ ರಕ್ಷಣೆಗೆ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ಕೊಡುತ್ತೇವೆ: ಅಣ್ಣಾಮಲೈ

https://youtu.be/VdisxEZw61M?si=HzDp7X7_TWpK34pO
Share with Friends
author avatar
News Desk