Latestರಾಷ್ಟ್ರೀಯ-National

ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ನಿಧನ

ಲಕ್ನೋ: ಅಯೋಧ್ಯೆ ರಾಮಮಂದಿರದ (Ayodhya Ram Mandir) ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ಪಂಡಿತ್‌ ಲಕ್ಷ್ಮೀಕಾಂತ್‌ ದೀಕ್ಷಿತ್‌ (Pandit Laxmikant Dixit) ನಿಧನರಾಗಿದ್ದಾರೆ.

ದೀಕ್ಷಿತ್‌ ಅವರು ಕಾಶಿಯ ಪ್ರಧಾನ ಅರ್ಚಕರೂ ಆಗಿದ್ದು, ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಾಶಿಯ ಪ್ರಖ್ಯಾತ ವೈದಿಕ ಶ್ರೌತ-ಸ್ಮಾರ್ತ ಸಂಸ್ಕಾರ ತಜ್ಞ, ಸಾಂಗ್ವೇದ ವಿದ್ಯಾಲಯದ ಯಜುರ್ವೇದ ಶಿಕ್ಷಕ ಲಕ್ಷ್ಮೀಕಾಂತ ದೀಕ್ಷಿತ್ ಅವರ ನಿಧನದಿಂದ ಸನಾತನಿ ಜಗತ್ತು ತುಂಬಲಾರದ ನಷ್ಟವನ್ನು ಅನುಭವಿಸಿದೆ. ಇದನ್ನೂ ಓದಿ: ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಕೇಳ್ಬೇಡಿ – ಹೆಚ್‌ಡಿಕೆ ಕಿಡಿ

https://youtu.be/tpq1XrlUoU8?si=_pPpp010KPzN5sOJ

ಜನವರಿ 22 ರಂದು ದೀಕ್ಷಿತ್‌ ಅವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪಿಸಲಾಯಿತು. ರಾಮಮಂದಿರದಲ್ಲಿ ಎಲ್ಲಾ ಪೂಜೆಗಳು ನೆರವೇರಿದ್ದವು. 2021ರ ಕಾಶಿ ವಿಶ್ವನಾಥ ಧಾಮದ ಉದ್ಘಾಟನೆಯ ಪೂಜೆಯಲ್ಲಿ ಅವರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಲೇಖಲಿ ಕಮಲಾ ಹಂಪನ ಹೃದಯಾಘಾತದಿಂದ ನಿಧನ

https://youtu.be/TUHqDSEB3jo?si=yc18lV49vQZ9PPy6

ಕಾಶಿಯ ವಿದ್ವಾಂಸರೂ, ಶ್ರೀರಾಮ ಜನ್ಮಭೂಮಿ ಪ್ರಾಣಪ್ರತಿಷ್ಠೆಯ ಪ್ರಧಾನ ಅರ್ಚಕರೂ ಆದ ವೇದಮೂರ್ತಿ ಅವರು, ಆಚಾರ್ಯ ಶ್ರೀ ಲಕ್ಷ್ಮೀಕಾಂತ ದೀಕ್ಷಿತ್ ಅವರ ನಿಧನ ಅಧ್ಯಾತ್ಮ ಮತ್ತು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಸಂಸ್ಕೃತ ಭಾಷೆ ಮತ್ತು ಭಾರತೀಯ ಸಂಸ್ಕೃತಿಗೆ ಅವರು ಮಾಡಿದ ಸೇವೆಗಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ -‌ ಇಂದು ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ ಜೈಲು ಫಿಕ್ಸ್‌?

https://youtu.be/RzHzla6ddIk?si=RgtObWxHmIVYqQdE
Share with Friends
author avatar
News Desk