ಸತ್ಯ, ನ್ಯಾಯ ಮೇಲುಗೈ ಸಾಧಿಸುತ್ತದೆ: ಯುವ ಪತ್ನಿ ಶ್ರೀದೇವಿ
ಬೆಂಗಳೂರು: ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ನಾನು ಹೆದರುವುದಿಲ್ಲ ಎಂದು ಸ್ಯಾಂಡಲ್ವುಡ್ (Sandalwood) ನಟ ಯುವ (Yuva Rajkumar) ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಹೇಳಿದ್ದಾರೆ.
ಸದ್ಯ ಸ್ಯಾಂಡಲ್ವುಡ್ ನಲ್ಲಿ ವಿಚ್ಛೇದನ ಪ್ರಕರಣಗಳು ಹೆಚ್ಚಾಗಿದ್ದು, ಇದೀಗ ಯುವ ಪತ್ನಿ ಶ್ರೀದೇವಿ ಅವರು ಈ ಸಂಬಂಧ ಇನ್ಸ್ಟಾದಲ್ಲಿ ಸ್ಟೋರಿ ಹಾಕಿರುವ ಅವರು, ಹಾರ್ವರ್ಡ್ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರಿಸಲು ನಾನು ಅಮೆರಿಕಗೆ ಹಿಂತಿರುಗುತ್ತಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಕೊಂಚ ರಿಲೀಫ್

ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಾಮಾಣಿಕವಾಗಿ ನನ್ನ ಹೃದಾಯಾಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ.
ಕಳೆದ ದಶಕಗಳಿಂದ ನನ್ನ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ, ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀರ ದುರದೃಷ್ಟಕರ. ಆದರೂ ಸಹ, ನಿಮ್ಮ ತಾಳ್ಮೆಗೆ, ಸತ್ಯದ ಪರ ಧೃತಿಗೆಡದೆ ನಿಲ್ಲುವ ನಿಮ್ಮ ಹಾಗೂ ನಿಮ್ಮ ಕುಟುಂಬದ ಧೈರ್ಯಕ್ಕೆ, ಸಹಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಈ ವಿಚಾರದಲ್ಲಿ ನಿಮಗಾದ ನೋವಿಗೆ ನಾನು ವಿನಮ್ರತೆಯಿಂದ ಕ್ಷಮೆಯಾಚಿಸುತ್ತೇನೆ. ಎಲ್ಲರಿಗೂ ನಿಮ್ಮಂಥ ಸಹೃದಯಿ ಸ್ನೇಹ ಬಳಗ ಸಿಗುವ ಅದೃಷ್ಟ ಸಿಗಲಿ ಎಂದು ಹಾರೈಸುತ್ತೇನೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಸೂರಜ್ ರೇವಣ್ಣಗೆ ಜೂನ್ 18 ರವರೆಗೆ ನ್ಯಾಯಾಂಗ ಬಂಧನ
ಕಳೆದ ಏಳು ತಿಂಗಳುಗಳು ತೀವ್ರ ಒತ್ತಡ ಮತ್ತು ಆಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ದನಿಯೆತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನನ್ನೊಂದಿಗೆ ದುಃಖಿಸಿ ಸಾಂತ್ವಾನ ಹೇಳಿದ ನನ್ನ ವಿದ್ಯಾರ್ಥಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು ಮತ್ತು ನ್ಯಾಯದ ಪರ ಹೋರಾಡಲು ನೀವೆಲ್ಲರೂ ನನಗೆ ಸಹಾಯ ಮಾಡಿದ್ದೀರಿ. ನಿಮ್ಮ ಪ್ರೀತಿ, ದಯೆಯ ಋಣ ತೀರಿಸುವ ಅವಕಾಶ ನನಗೆ ಸಿಗಲಿ ಎಂದು ನಾನು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ ಹಾಗೂ ಅದಕ್ಕಾಗಿ ಹೋರಾಡುತ್ತೇನೆ ಎಂದು ನಾನು ಪುನರುಚ್ಚರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ. ಇದನ್ನೂ ಓದಿ: 6 ವರ್ಷದ ಬಾಲಕಿಯ ಶವ ರೈಲ್ವೆ ನಿಲ್ದಾಣದಲ್ಲಿ ಪತ್ತೆ – ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಶಂಕೆ

ಹಾರ್ವರ್ಡ್ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರಿಸಲು ನಾನು ಅಮೆರಿಕಗೆ ಹಿಂತಿರುಗುತ್ತಿದ್ದೇನೆ. ಈ ಸಮಯವು, ನನಗೆ ಇನ್ನಷ್ಟು ಕಲಿಯಲು, ಬೆಳೆಯಲು ಮತ್ತು ಎಲ್ಲಾ ಆಘಾತಗಳಿಂದ ಗುಣಮುಖಳಾಗಲು ಸಹಾಯ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರಿಸುತ್ತೇನೆ. ದೇವರ ಆಶೀರ್ವಾದ ಸದಾ ಎಲ್ಲರ ಮೇಲೆ ಇರಲಿ. ಇದನ್ನೂ ಓದಿ: ಮೊದಲ ಬಾರಿಗೆ ಮಗನನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ
