Crime NewsLatestಬೆಂಗಳೂರು-Bengaluruರಾಜ್ಯ-Karnataka

ಭೂಗತ ಪಾತಕಿ ರವಿ ಪೂಜಾರಿಗೆ ಶಸ್ತ್ರಚಿಕಿತ್ಸೆ- ಆಸ್ಪತ್ರೆಗೆ ದಾಖಲು

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ (Ravi Poojary) ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಹರ್ನಿಯಾ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಸೋಮವಾರ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಾಗಿದ್ದಾನೆ. 60ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್ ಗಳಲ್ಲಿ ಭಾಗಿಯಾಗಿರುವ ರವಿ ಪೂಜಾರಿ ಮೇಲೆ ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿ ಹಲವೆಡೆ ಕೇಸ್ ದಾಖಲಾಗಿದ್ದವು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಪ್ರದೀಪ್‌ ಈಶ್ವರ್‌

https://youtu.be/MqYiVxcb02I?si=Fvx9mG5cTJ_ViZVv

ಭೂಗತವಾಗಿದ್ದುಕೊಂಡೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರವಿ ಪೂಜಾರಿಯನ್ನು ಅರೆಸ್ಟ್ ಮಾಡಲು ಭಾರತದ ತನಿಖಾ ಸಂಸ್ಥೆಗಳು ಸೆನೆಗಲ್ ದೇಶದೊಂದಿಗೆ ಸಂಪರ್ಕದಲ್ಲಿದ್ದವು. ಈ ಹಿನ್ನಲೆಯಲ್ಲಿ 2019 ರಲ್ಲಿ ಸೆನೆಗಲ್ ಪೊಲೀಸರು ರವಿ ಪೂಜಾರಿಯನ್ನು ಬಂಧಿಸಲಾಗಿತ್ತು. ವಿಚಾರಣೆ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ. ಇದನ್ನೂ ಓದಿ: ಕುವೈತ್‌ ಅಗ್ನಿ ದುರಂತ: 45 ಭಾರತೀಯರ ಶವಗಳೊಂದಿಗೆ ಕೇರಳಕ್ಕೆ ಬಂದಿಳಿದ ಸೇನಾ ವಿಮಾನ

https://youtu.be/scaejbJlrAQ?si=y5snJ-qTtAAnxIyd
Share with Friends
author avatar
News Desk