BlogLatestಬೆಳಗಾವಿ-Belagaviರಾಜ್ಯ-Karnataka

ಬೆಳಗಾವಿಯ ಸುವರ್ಣಸೌಧದಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಲೋಕಾರ್ಪಣೆ

ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ” ಕಾರ್ಯಕ್ರಮದ ಮಹಾತ್ಮಗಾಂಧಿ ಅವರ ಲೋಗೋ ಅನಾವರಣ ಗೊಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ‘ವಿಶ್ವದ ಮೊದಲ ಸಂಸತ್’ ಎಂಬ ಖ್ಯಾತಿಯ ‘ಅನುಭವ ಮಂಟಪದ’ ಬೃಹತ್ ತೈಲವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ಸುವರ್ಣಸೌಧದ ಸೆಂಟ್ರಲ್ ಹಾಲ್ ಮುಂಭಾಗ ಬಿಡಿಸಿದ ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷ ಯು. ಟಿ. ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರಾದ ಹೆಚ್. ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಮುಂತಾದವರು ಉಪಸ್ಥಿತರಿದ್ದರು.

ಕ್ಯಾನ್ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರ ಇದಾಗಿದೆ. ಬೆಂಗಳೂರು ಚಿತ್ರಕಲಾ ಪರಿಷತ್​ನ ಕಲಾವಿದ ಸತೀಶ್ ರಾವ್, ಶಿವಮೊಗ್ಗದ ಶ್ರೀಕಾಂತ್ ಹೆಗಡೆ ಸಿದ್ದಾಪುರ, ಶೇಷಾದ್ರಿಪುರಂ ಕೆನ್ ಸ್ಕೂಲ್ ಕಲಾಶಾಲೆಯ ಅಶೋಕ್ ಯು. ಜಗಳೂರು, ರಾಜಾ ರವಿವರ್ಮ ಕಲಾಶಾಲೆಯ ರೂಪಾ ಎಂ. ಆರ್. ವೀರಣ್ಣ ಮಡಿವಾಳಪ್ಪ ಬಲ್ಲಿ, ಬೈಲಹೊಂಗಲ ಮತ್ತು ಶ್ರೀ ಮಹೇಶ ನಿಂಗಪ್ಪ ಹಾಗೂ ಜಮಖಂಡಿಯ ದಫಲಾಪುರ ಅವರ ಕುಂಚದಲ್ಲಿ ಮೂಡಿಬಂದಿದೆ.

ಬಳಿಕ ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದ, ಸಭಾಧ್ಯಕ್ಷರ ಕೊಠಡಿಯಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಕಲಾವಿದರನ್ನು ಸನ್ಮಾನಿಸಿದರು.‌

Share with Friends
author avatar
News Desk