Latestಬೆಂಗಳೂರು-Bengaluruರಾಜ್ಯ-Karnataka

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ – ಸಿಬಿಐ ಬಳಿಕ ತನಿಖೆಗೆ ED ಎಂಟ್ರಿ!

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ (Valmiki Corporation Corruption Scam) ಪ್ರಕರಣಕ್ಕೆ ಈಗ ಸಿಬಿಐ ಬಳಿಕ ಜಾರಿ ನಿರ್ದೇಶನಾಲಯ (ED) ಎಂಟ್ರಿ ಆಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸಿಬಿಐ ಬಳಿಕ ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದ್ದು, ಯೂನಿಯನ್ ಬ್ಯಾಂಕ್ (Union Bank Of India) ನೀಡಿದ್ದ ದೂರು ಹಾಗೂ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಸಿಬಿಐನಿಂದ ಮಾಹಿತಿ ಪಡೆದುಕೊಂಡಿದೆ. ಜೊತೆಗೆ ಸಿಬಿಐ ದಾಖಲಿಸಿರುವ ಎಫ್‌ಐಆರ್‌ ಬಗ್ಗೆಯೂ ಮಾಹಿತಿ ಪಡೆದಿದ್ದು, ಮುಂದಿನ ವಾರದಲ್ಲೇ ಇಡಿ ಇನ್ನಷ್ಟು ತನಿಖೆಯೊಂದಿಗೆ ಎಫ್‌ಐಆರ್‌ ದಾಖಲಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಮಳೆಯಿಂದಾಗಿ ಆಲಮಟ್ಟಿ ಜಲಾಶಯ ಓಳ ಹರಿವು ಹೆಚ್ಚಳ

https://youtu.be/AIedS4838dw?si=5aMpLqyNm4CwAwKR

ಈಗಾಗಲೇ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Karnataka Maharshi Valmiki Scheduled Tribe Development Corporation Ltd) ನಡೆದಿರುವ ಹಗರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.

https://youtu.be/N__BjhNj9eo?si=fXI22OQaJSPNIFs-

ಖಾತೆಗಳಲ್ಲಿನ ವಂಚನೆಯ ವಹಿವಾಟಿನ ಬಗ್ಗೆ ಬ್ಯಾಂಕ್ ಅರಿವು ಹೊಂದಿದೆ. ಅಕ್ರಮಗಳು ಬೆಳಕಿಗೆ ಬಂದಾಗ ಬ್ಯಾಂಕ್ ತಕ್ಷಣವೇ ಪ್ರಶ್ನಾರ್ಹ ವಹಿವಾಟುಗಳನ್ನು ವಂಚನೆ ಎಂದು ಘೋಷಿಸಿದೆ. ಸಂಪೂರ್ಣ ತನಿಖೆ ಮತ್ತು ಅಪರಾಧಿಗಳ ಪತ್ತೆಗಾಗಿ ಮೇ 30 ರಂದು ಕೇಂದ್ರೀಯ ತನಿಖಾ ದಳಕ್ಕೆ (CBI) ದೂರು ನೀಡಿದ್ದೇವೆ. ಮುಂದಿನ ವಿಚಾರಣೆಗಾಗಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ಸಮಸ್ಯೆಯನ್ನು ನ್ಯಾಯಯುತವಾಗಿ ಮತ್ತು ತ್ವರಿತವಾಗಿ ಪರಿಹರಿಸಲು ನಾವು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಮತ್ತು ಅಂತಹ ಘಟನೆಗಳನ್ನು ತಡೆಯಲು ನಾವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದೆ. ಇದನ್ನೂ ಓದಿ: ಜರ್ಮನಿಯಲ್ಲಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಪ್ರಜ್ವಲ್ ಗರ್ಲ್‍ಫ್ರೆಂಡ್‍- ಪ್ರೇಯಸಿಗೆ SIT ನೋಟಿಸ್

https://youtu.be/YU0fyyFEI8I?si=Vi8vsUKT_39iWa_m
Share with Friends
author avatar
News Desk